23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನ 4 ರಂದು ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ , ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಹರಿದಾಸ್ ಎಸ್ . ಎಂ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಅಧ್ಯಕ್ಷ ಶಿವಕುಮಾರ್ ಎಸ್.ಎಂ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲೆ ಡಾ. ಸವಿತಾ , ಶ್ರೀ ಗುರುದೇವ ಪ.ಪೂ ಕಾಲೇಜ್ ನ ಪ್ರಾಂಶುಪಾಲ ಸುಕೇಶ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿಯುಲ್ಲ ಭಾಗವಹಿಸಲಿದ್ದಾರೆ.

 ನವೆಂಬರ್ 4 ರಂದು ಬೆಳಗ್ಗೆ 9 ಘಂಟೆಯಿಂದ ಮಧ್ಯಾಹ್ನ 1 ಘಂಟೆ ತನಕ ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ರಕ್ತದಾನ ಮಾಡಬೇಕು. ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!