30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

ಬಳಂಜ: ಬಳಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಬೇರೆ ಜಿಲ್ಲೆಗೆ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದು ಅವರಿಗೆ ಬಿಳ್ಕೋಡುಗೆ ಸಮಾರಂಭವು ಅ. 31 ರಂದು ಬಳಂಜ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶ್ರೀನಿವಾಸ್ ಅವರು ಮಾಡಿದ ಕೆಲಸ ಕಾರ್ಯಗಳಿಂದ ಪಂಚಾಯತ್ ಗೆ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ನಿಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಕೆಗಳು ಎಂದರು.

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರು, ಮಾಜಿ ಮಂಡಲ ಪಂಚಾಯತ್ ಅಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಮಾತನಾಡಿ ಪಂಚಾಯತ್ ನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅಧಿಕಾರಿ ಶ್ರೀನಿವಾಸ್ ಅವರ ಶ್ರಮ ಬಹಳಷ್ಟು ಇದೆ. ಮುಂದಿನ ಜೀವನಕ್ಕೆ ಶುಭ ಹಾರೈಕೆಗಳು ಎಂದರು.

ತಾ.ಪಂ ಮಾಜಿ ಸದಸ್ಯರು, ಸಮಾಜಸೇವಕರಾದ ಹೆಚ್.ಧರ್ಣಪ್ಪ ಪೂಜಾರಿ ಮಾತನಾಡಿ ಪಂಚಾಯತ್ ಗೆ ಶ್ರೀನಿವಾಸ್ ಅವರು ಅಧಿಕಾರಿಯಾಗಿ ಬಂದ ಮೇಲೆ ಪಂಚಾಯತ್ ನಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಹಲವಾರು ಅಭಿವೃದ್ಧಿ ಕಾರ್ಯಗಳು, ಶಾಶ್ವತ ಯೋಜನೆಗಳು ನಡೆದಿದೆ. ಅವರ ಶ್ರಮದಿಂದ ಹಲವಾರು ಪ್ರಶಸ್ತಿಗಳು ಪಂಚಾಯತ್ ಗೆ ಸಿಕ್ಕಿದೆ ಎಂದರು.

ವೇದಿಕೆಯಲ್ಲಿ ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನವರು ಶ್ರೀನಿವಾಸ್ ಅವರನ್ನು ಸನ್ಮಾನಿಸಿದರು.ಹಾಗೂ ತಾ.ಪಂ ಉದ್ಯೋಗ ಖಾತರಿ ತೋಟಗಾರಿಕ ಇಂಜಿನಿಯರ್ ಪೂರ್ಣಿಮಾ,ಉದ್ಯೋಗ ಖಾತರಿ ಇಂಜಿನಿಯರ್ ರಂಜನ್ ಇವರನ್ನು ಗೌರವಿಸಲಾಯಿತು.
ಪಂಚಾಯತ್ ಸದಸ್ಯರು, ಊರವರು, ಸಿಬ್ಬಂದಿಗಳು ಸಹಕರಿಸಿದರು.

Related posts

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya
error: Content is protected !!