April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!