22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya
error: Content is protected !!