38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಕ್ಷೇತ್ರದ ಭಕ್ತ ವರ್ಗ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕ್ಷೇತ್ರದ ಬಗ್ಗೆ ತಿಳಿಸಿದರು‌. ಬ್ರಹ್ಮಕಲಶೋತ್ಸವವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಸಮಿತಿ ಗೌರವಾಧ್ಯಕ್ಷ ಹರೀಶ್ ಪೂಂಜರವರಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರವನ್ನು ಯಾಚಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಊರವರ ವತಿಯಿಂದ ಶಾಸಕರಿಗೆ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಆನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಎಂ ಪಾರೆಂಕಿ,ಆರ್ಚಕರಾದ ಸೂರ್ಯನಾರಾಯಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಕುಶಾಲಪ್ಪ ಗೌಡ ಪೊಸಲಾಯಿ, ಸುಧೀರ್ ಆರ್ ಸುವರ್ಣ,ನಾರಾಯಣ ಗೌಡ, ವಿಶ್ವನಾಥ್,ಸಂಜೀವ ನಾಯ್ಕ್, ಚಿದಾನಂದ,ವಂಸತ ,ಸತೀಶ್, ಜಗನ್ನಾಥ, ಸತೀಶ್, ವಿಶ್ವನಾಥ್, ಜಯಂತಿ, ವೇದಾವತಿ,ಬಾಲಕೃಷ್ಣ,ಕೃಷ್ಣಪ್ಪ ಪಿದಾರ ಶೀನಪ್ಪ, ಸೋಮನಾಥ ಇವರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!