25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ರವರು ಅ.31ರಂದು ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆನಂದ ಆಳ್ವರವರು ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ಕೃಷಿಕರಾಗಿದ್ದರು. 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.

ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya
error: Content is protected !!