25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನ 4 ರಂದು ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ , ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಹರಿದಾಸ್ ಎಸ್ . ಎಂ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಅಧ್ಯಕ್ಷ ಶಿವಕುಮಾರ್ ಎಸ್.ಎಂ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲೆ ಡಾ. ಸವಿತಾ , ಶ್ರೀ ಗುರುದೇವ ಪ.ಪೂ ಕಾಲೇಜ್ ನ ಪ್ರಾಂಶುಪಾಲ ಸುಕೇಶ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿಯುಲ್ಲ ಭಾಗವಹಿಸಲಿದ್ದಾರೆ.

 ನವೆಂಬರ್ 4 ರಂದು ಬೆಳಗ್ಗೆ 9 ಘಂಟೆಯಿಂದ ಮಧ್ಯಾಹ್ನ 1 ಘಂಟೆ ತನಕ ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ರಕ್ತದಾನ ಮಾಡಬೇಕು. ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!