April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನ 4 ರಂದು ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ , ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಹರಿದಾಸ್ ಎಸ್ . ಎಂ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಅಧ್ಯಕ್ಷ ಶಿವಕುಮಾರ್ ಎಸ್.ಎಂ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲೆ ಡಾ. ಸವಿತಾ , ಶ್ರೀ ಗುರುದೇವ ಪ.ಪೂ ಕಾಲೇಜ್ ನ ಪ್ರಾಂಶುಪಾಲ ಸುಕೇಶ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿಯುಲ್ಲ ಭಾಗವಹಿಸಲಿದ್ದಾರೆ.

 ನವೆಂಬರ್ 4 ರಂದು ಬೆಳಗ್ಗೆ 9 ಘಂಟೆಯಿಂದ ಮಧ್ಯಾಹ್ನ 1 ಘಂಟೆ ತನಕ ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ರಕ್ತದಾನ ಮಾಡಬೇಕು. ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!