September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!