25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya
error: Content is protected !!