September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!