23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಶಿಶಿಲ : ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟ ಶಿಶಿಲದ ಮಹಾಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅ.31ರಂದು ನಡೆಯಿತು.

ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ, ವಲಯ ಮೇಲ್ವಿಚಾರಕರಾದ ಜಯಾನಂದ್ , ವೀಣಾಶ್ರೀ, ಪಂಚಾಯತ್ ಅಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಉಪಾಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಪ್ರಾರಂಭಿಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಎನ್.ಆರ್.ಎಲ್.ಎಮ್ ಯೋಜನೆಯ ಉದ್ದೇಶ ಮತ್ತು ವಿವಿಧ ಜೀವನೋಪಾಯ ಚಟುವಟಿಕೆ ಬಗ್ಗೆ ಸಾವಿಸ್ತಾರವಾಗಿ ವಿವರಿಸಿದರು. ಒಕ್ಕೂಟದ ನೂತನ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ಕೃಷಿ ಸಖಿ ವಸಂತಿ ಒಕ್ಕೂಟದ ವರದಿ ಮಂಡನೆ ಮಾಡಿದರು. ಎಮ್.ಬಿಕೆ ಶಾರದಾ ಕಾರ್ಯಕ್ರಮ ನಿರೂಪಿಸಿದರು. ಎಲ್.ಸಿ.ಆರ್ ಪಿ ಶಶಿ ಭಾಗೀರಥಿ, ಕೃಷಿ ಸಖಿ, ಪಶು ಸಖಿ, ಬ್ಯಾಂಕ್ ಸಖಿ ಭಾಗವಹಿಸಿದ್ದರು. ಸಂಜೀವಿನಿ ಸದಸ್ಯರು. ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾರದಾ ಧನ್ಯವಾದವಿತ್ತರು.

Related posts

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!