25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya
error: Content is protected !!