23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!