25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
error: Content is protected !!