30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

ಬೆಳ್ತಂಗಡಿ: ‘ ಉನ್ನತ ಶಿಕ್ಷಣ ಪಡೆದು, ಸಂಶೋಧನಾ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳಿವೆ. ಬಯೋ ಕೆಮಿಸ್ಟ್ರಿ ಅಧ್ಯಯನದಲ್ಲಿ ರಕ್ತದಲ್ಲಿರುವ ಸುಮಾರು ಎರಡು ಸಾವಿರ ಪ್ರೊಟೀನ್ ಗಳ ಗುಣಲಕ್ಷಣಗಳನ್ನು ಅರಿತು ದೇಹದ ಕಾಯಿಲೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಆವಿಷ್ಕಾರವಾಗಿದೆ. ಬಯೋಪ್ಸಿ ಮಾಡದೆ ದೇಹದೊಳಗಿನ ರೋಗ ಪತ್ತೆ ಮಾಡುವ ವಿಧಾನಕ್ಕೆ ಇದು ಪೂರಕವಾಗಿದೆ. ಜೀನ್ ಗಳ ರಚನೆ, ಪ್ರೊಟೀನ್ ಗಳ ರಚನೆ ಮೊದಲಾದ ಕ್ಷೇತ್ರಗಳಲ್ಲಿ ಇತ್ತೀಚಿನ ವೈದ್ಯಕೀಯ ಅಧ್ಯಯನ ಗಳು ಸೂಕ್ಷ್ಮಾತಿಸೂಕ್ಷ್ಮ ವಾಗಿ ಬೆಳೆಯುತ್ತಿವೆ ‘. ಎಂದು ಅಮೆರಿಕಾದ ಮೇರಿ ಲ್ಯಾಂಡ್ ನ ಪ್ರೋಟಿಯೋಮಿಕ್ಸ್ ಇಂಕಂಪ್ಲೀಟ್ ಒಮಿಕ್ಸ್ ಸಂಶೋಧನಾ ಕೇಂದ್ರದ ಉಪಾಧ್ಯಕ್ಷರಾದ ಡಾ. ರಘೋತ್ತಮ ಅವರು ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ನಡೆದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಮೆರಿಕಾದ ಡೆಲ್ವಾರೆ ಯೂನಿವರ್ಸಿಟಿ ಯ ನ್ಯೂರಾಲಜಿಕ್ ಫಿಸಿಕಲ್ ಥೆರಪಿ ವಿಭಾಗದ ನಿರ್ದೇಶಕರಾದ ಡಾ. ಸೌಮ್ಯ ಅವರು ಮಾತನಾಡಿ ‘ ಶಸ್ತ್ರ ಚಿಕಿತ್ಸೆಯ ನಂತರ ದೇಹವನ್ನು ಪುನಃ ಸಾಮಾನ್ಯ ಸ್ಥಿತಿಗೆ ತರುವಲ್ಲಿ ಫಿಸಿಯೋಥೆರಪಿ ಮಹತ್ತ್ವವನ್ನು ವಿವರಿಸಿದರು.

ಸಂವಾದದ ಬಳಿಕ ವಿಜ್ಞಾನಿಗಳನ್ನು ಗೌರವಿಸಲಾಯಿತು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ , ಆಡಳಿತಾಧಿಕಾರಿ ಪುರುಷೋತ್ತಮ್ , ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್ , ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡರು.

Related posts

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
error: Content is protected !!