30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕನ್ನಡದ ಹಿರಿಮೆ, ಭಾಷೆಯ ಅಗತ್ಯ, ಸಾಹಿತ್ಯ ಪ್ರೀತಿ, ಭಾಷೆಯ ಶುದ್ಧತೆ, ತಾಯ್ನಾಡಿನ ಗೌರವ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾಷೆಯ ಮಹತ್ವ,ಕನ್ನಡ ಹೃದಯದ ಭಾಷೆ,ಭಾವನೆಯನ್ನು ಸ್ಪಂದಿಸುವ ಭಾಷೆ ನಾವು ಆಂಗ್ಲ ಮಾಧ್ಯಮದವರು ಆದರೂ ಕನ್ನಡ ಹಾಗೂ ಕರ್ನಾಟಕದ ಸಂಸ್ಕೃತಿಯನ್ನು ಮರೆಯಲಾರೆವು ಎಂದು ನುಡಿದು ಎಲ್ಲರನ್ನೂ ಸ್ವಾಗತಿಸಿದರು. ರಾಜ್ಯೋತ್ಸವದ ಕುರಿತಾಗಿ ಇಣುಕು ನೋಟ ಪಂಪನಿಂದ ಆಧುನಿಕತೆಯವರೆಗೆ ಎಂಬ ಶೀರ್ಷಿಕೆ ಅಡಿಯಲ್ಲಿ ಭಿತ್ತಿ ಪತ್ರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಕುಮಾರಿ ಆಶಿತಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಕುಮಾರಿ ಅಪೇಕ್ಷ ಅತಿಥಿಗಳ ಕಿರು ಪರಿಚಯವನ್ನು ನೀಡಿ,ಕುಮಾರಿ ಅನಾಘ ವಂದಿಸಿದರು.ವಿದ್ಯಾರ್ಥಿಗಳು ಹಳದಿ ಹಾಗೂ ಕೆಂಪು ಬಣ್ಣದ ದಿರಿಸಿನಿಂದ ಕಂಗೊಳಿಸುತ್ತಿದ್ದರು.ಶಾಲಾ ಶಿಕ್ಷಕ ವೃಂದ ,ಶಿಕ್ಷಣ ಸ್ನಾತಕೋತ್ತರದ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya
error: Content is protected !!