ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕನ್ನಡದ ಹಿರಿಮೆ, ಭಾಷೆಯ ಅಗತ್ಯ, ಸಾಹಿತ್ಯ ಪ್ರೀತಿ, ಭಾಷೆಯ ಶುದ್ಧತೆ, ತಾಯ್ನಾಡಿನ ಗೌರವ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾಷೆಯ ಮಹತ್ವ,ಕನ್ನಡ ಹೃದಯದ ಭಾಷೆ,ಭಾವನೆಯನ್ನು ಸ್ಪಂದಿಸುವ ಭಾಷೆ ನಾವು ಆಂಗ್ಲ ಮಾಧ್ಯಮದವರು ಆದರೂ ಕನ್ನಡ ಹಾಗೂ ಕರ್ನಾಟಕದ ಸಂಸ್ಕೃತಿಯನ್ನು ಮರೆಯಲಾರೆವು ಎಂದು ನುಡಿದು ಎಲ್ಲರನ್ನೂ ಸ್ವಾಗತಿಸಿದರು. ರಾಜ್ಯೋತ್ಸವದ ಕುರಿತಾಗಿ ಇಣುಕು ನೋಟ ಪಂಪನಿಂದ ಆಧುನಿಕತೆಯವರೆಗೆ ಎಂಬ ಶೀರ್ಷಿಕೆ ಅಡಿಯಲ್ಲಿ ಭಿತ್ತಿ ಪತ್ರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಕುಮಾರಿ ಆಶಿತಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಕುಮಾರಿ ಅಪೇಕ್ಷ ಅತಿಥಿಗಳ ಕಿರು ಪರಿಚಯವನ್ನು ನೀಡಿ,ಕುಮಾರಿ ಅನಾಘ ವಂದಿಸಿದರು.ವಿದ್ಯಾರ್ಥಿಗಳು ಹಳದಿ ಹಾಗೂ ಕೆಂಪು ಬಣ್ಣದ ದಿರಿಸಿನಿಂದ ಕಂಗೊಳಿಸುತ್ತಿದ್ದರು.ಶಾಲಾ ಶಿಕ್ಷಕ ವೃಂದ ,ಶಿಕ್ಷಣ ಸ್ನಾತಕೋತ್ತರದ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya
error: Content is protected !!