September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಭಾಷಣಕಾರರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಸಹ ಪ್ರಾಧ್ಯಪಕ ಹಳೆ ಮನೆ ರಾಜಶೇಖರ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಸಮಾಜಕಲ್ಯಾಣ ಇಲಾಖೆಯ ಹೇಮಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರೀಯಾ ಆಗ್ನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಪ್ಪ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!