25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೆ|ಫಾ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.”ನಾವು ಕನ್ನಡ ನೆಲ, ಜಲ ,ಫಲವನ್ನು ಉಣ್ಣುತ್ತಿದ್ದೇವೆ. ಕನ್ನಡ ವ್ಯವಸ್ಥಿತ ಭಾಷೆ.ಕನ್ನಡ ಭಾಷೆ ಮಾತ್ರವಲ್ಲ ಅದು ನಮ್ಮ ಸಂಸ್ಕೃತಿ. ಕನ್ನಡ ನಾಡು ರೂಪುಗೊಳ್ಳಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ,ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳುವ ಸುದಿನವಿಂದು. ನಾಡು – ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ, ಕನ್ನಡ ನಾಡು -ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗ್ಗೆ ನಾವು ಗಮನಹರಿಸ ಬೇಕು ಎಂದು ಅವರು ಸಂದೇಶ ನೀಡಿದರು.ಕನ್ನಡ ನಾಡು- ನುಡಿಯ ಸಂವರ್ಧನೆಗಾಗಿ ನಾವು ಸದಾ ಸಿದ್ಧರಿರ ಬೇಕು.ಭಾಷೆಯನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅವರು ಹೇಳಿದರು.

ಪುಂಜಾಲಕಟ್ಟೆ ಕ್ಲಸ್ಟರ್ ಸಿಆರ್ ಪಿ ಚೇತನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಜೆರೊಮ್ ಡಿಸೋಜ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿ, ಶಿಕ್ಷಕಿಯರಾದ ಸುಚಿತ್ರಕಲಾ ರಾಜ್ಯೋತ್ಸವದ ಕುರಿತು ಮಾತನಾಡಿದರು, ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya
error: Content is protected !!