ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೆ|ಫಾ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.”ನಾವು ಕನ್ನಡ ನೆಲ, ಜಲ ,ಫಲವನ್ನು ಉಣ್ಣುತ್ತಿದ್ದೇವೆ. ಕನ್ನಡ ವ್ಯವಸ್ಥಿತ ಭಾಷೆ.ಕನ್ನಡ ಭಾಷೆ ಮಾತ್ರವಲ್ಲ ಅದು ನಮ್ಮ ಸಂಸ್ಕೃತಿ. ಕನ್ನಡ ನಾಡು ರೂಪುಗೊಳ್ಳಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ,ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳುವ ಸುದಿನವಿಂದು. ನಾಡು – ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ, ಕನ್ನಡ ನಾಡು -ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗ್ಗೆ ನಾವು ಗಮನಹರಿಸ ಬೇಕು ಎಂದು ಅವರು ಸಂದೇಶ ನೀಡಿದರು.ಕನ್ನಡ ನಾಡು- ನುಡಿಯ ಸಂವರ್ಧನೆಗಾಗಿ ನಾವು ಸದಾ ಸಿದ್ಧರಿರ ಬೇಕು.ಭಾಷೆಯನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅವರು ಹೇಳಿದರು.

ಪುಂಜಾಲಕಟ್ಟೆ ಕ್ಲಸ್ಟರ್ ಸಿಆರ್ ಪಿ ಚೇತನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಜೆರೊಮ್ ಡಿಸೋಜ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿ, ಶಿಕ್ಷಕಿಯರಾದ ಸುಚಿತ್ರಕಲಾ ರಾಜ್ಯೋತ್ಸವದ ಕುರಿತು ಮಾತನಾಡಿದರು, ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ – ವೈಯಕ್ತಿಕ ನೆಲೆಯಲ್ಲಿ ಆಥಿ೯ಕ ಸಹಾಯ ಹಸ್ತಾಂತರ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya
error: Content is protected !!