September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

ಬೆಳ್ತಂಗಡಿ: ‘ ಉನ್ನತ ಶಿಕ್ಷಣ ಪಡೆದು, ಸಂಶೋಧನಾ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳಿವೆ. ಬಯೋ ಕೆಮಿಸ್ಟ್ರಿ ಅಧ್ಯಯನದಲ್ಲಿ ರಕ್ತದಲ್ಲಿರುವ ಸುಮಾರು ಎರಡು ಸಾವಿರ ಪ್ರೊಟೀನ್ ಗಳ ಗುಣಲಕ್ಷಣಗಳನ್ನು ಅರಿತು ದೇಹದ ಕಾಯಿಲೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಆವಿಷ್ಕಾರವಾಗಿದೆ. ಬಯೋಪ್ಸಿ ಮಾಡದೆ ದೇಹದೊಳಗಿನ ರೋಗ ಪತ್ತೆ ಮಾಡುವ ವಿಧಾನಕ್ಕೆ ಇದು ಪೂರಕವಾಗಿದೆ. ಜೀನ್ ಗಳ ರಚನೆ, ಪ್ರೊಟೀನ್ ಗಳ ರಚನೆ ಮೊದಲಾದ ಕ್ಷೇತ್ರಗಳಲ್ಲಿ ಇತ್ತೀಚಿನ ವೈದ್ಯಕೀಯ ಅಧ್ಯಯನ ಗಳು ಸೂಕ್ಷ್ಮಾತಿಸೂಕ್ಷ್ಮ ವಾಗಿ ಬೆಳೆಯುತ್ತಿವೆ ‘. ಎಂದು ಅಮೆರಿಕಾದ ಮೇರಿ ಲ್ಯಾಂಡ್ ನ ಪ್ರೋಟಿಯೋಮಿಕ್ಸ್ ಇಂಕಂಪ್ಲೀಟ್ ಒಮಿಕ್ಸ್ ಸಂಶೋಧನಾ ಕೇಂದ್ರದ ಉಪಾಧ್ಯಕ್ಷರಾದ ಡಾ. ರಘೋತ್ತಮ ಅವರು ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ನಡೆದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಮೆರಿಕಾದ ಡೆಲ್ವಾರೆ ಯೂನಿವರ್ಸಿಟಿ ಯ ನ್ಯೂರಾಲಜಿಕ್ ಫಿಸಿಕಲ್ ಥೆರಪಿ ವಿಭಾಗದ ನಿರ್ದೇಶಕರಾದ ಡಾ. ಸೌಮ್ಯ ಅವರು ಮಾತನಾಡಿ ‘ ಶಸ್ತ್ರ ಚಿಕಿತ್ಸೆಯ ನಂತರ ದೇಹವನ್ನು ಪುನಃ ಸಾಮಾನ್ಯ ಸ್ಥಿತಿಗೆ ತರುವಲ್ಲಿ ಫಿಸಿಯೋಥೆರಪಿ ಮಹತ್ತ್ವವನ್ನು ವಿವರಿಸಿದರು.

ಸಂವಾದದ ಬಳಿಕ ವಿಜ್ಞಾನಿಗಳನ್ನು ಗೌರವಿಸಲಾಯಿತು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ , ಆಡಳಿತಾಧಿಕಾರಿ ಪುರುಷೋತ್ತಮ್ , ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್ , ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡರು.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಐ.ಟಿ.ಐ ಹಾಗೂ ಬಿ.ಎಡ್ – ಡಿ.ಎಡ್. ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya
error: Content is protected !!