23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕನ್ನಡದ ಹಿರಿಮೆ, ಭಾಷೆಯ ಅಗತ್ಯ, ಸಾಹಿತ್ಯ ಪ್ರೀತಿ, ಭಾಷೆಯ ಶುದ್ಧತೆ, ತಾಯ್ನಾಡಿನ ಗೌರವ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾಷೆಯ ಮಹತ್ವ,ಕನ್ನಡ ಹೃದಯದ ಭಾಷೆ,ಭಾವನೆಯನ್ನು ಸ್ಪಂದಿಸುವ ಭಾಷೆ ನಾವು ಆಂಗ್ಲ ಮಾಧ್ಯಮದವರು ಆದರೂ ಕನ್ನಡ ಹಾಗೂ ಕರ್ನಾಟಕದ ಸಂಸ್ಕೃತಿಯನ್ನು ಮರೆಯಲಾರೆವು ಎಂದು ನುಡಿದು ಎಲ್ಲರನ್ನೂ ಸ್ವಾಗತಿಸಿದರು. ರಾಜ್ಯೋತ್ಸವದ ಕುರಿತಾಗಿ ಇಣುಕು ನೋಟ ಪಂಪನಿಂದ ಆಧುನಿಕತೆಯವರೆಗೆ ಎಂಬ ಶೀರ್ಷಿಕೆ ಅಡಿಯಲ್ಲಿ ಭಿತ್ತಿ ಪತ್ರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಕುಮಾರಿ ಆಶಿತಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಕುಮಾರಿ ಅಪೇಕ್ಷ ಅತಿಥಿಗಳ ಕಿರು ಪರಿಚಯವನ್ನು ನೀಡಿ,ಕುಮಾರಿ ಅನಾಘ ವಂದಿಸಿದರು.ವಿದ್ಯಾರ್ಥಿಗಳು ಹಳದಿ ಹಾಗೂ ಕೆಂಪು ಬಣ್ಣದ ದಿರಿಸಿನಿಂದ ಕಂಗೊಳಿಸುತ್ತಿದ್ದರು.ಶಾಲಾ ಶಿಕ್ಷಕ ವೃಂದ ,ಶಿಕ್ಷಣ ಸ್ನಾತಕೋತ್ತರದ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!