23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕನ್ನಡದ ಹಿರಿಮೆ, ಭಾಷೆಯ ಅಗತ್ಯ, ಸಾಹಿತ್ಯ ಪ್ರೀತಿ, ಭಾಷೆಯ ಶುದ್ಧತೆ, ತಾಯ್ನಾಡಿನ ಗೌರವ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾಷೆಯ ಮಹತ್ವ,ಕನ್ನಡ ಹೃದಯದ ಭಾಷೆ,ಭಾವನೆಯನ್ನು ಸ್ಪಂದಿಸುವ ಭಾಷೆ ನಾವು ಆಂಗ್ಲ ಮಾಧ್ಯಮದವರು ಆದರೂ ಕನ್ನಡ ಹಾಗೂ ಕರ್ನಾಟಕದ ಸಂಸ್ಕೃತಿಯನ್ನು ಮರೆಯಲಾರೆವು ಎಂದು ನುಡಿದು ಎಲ್ಲರನ್ನೂ ಸ್ವಾಗತಿಸಿದರು. ರಾಜ್ಯೋತ್ಸವದ ಕುರಿತಾಗಿ ಇಣುಕು ನೋಟ ಪಂಪನಿಂದ ಆಧುನಿಕತೆಯವರೆಗೆ ಎಂಬ ಶೀರ್ಷಿಕೆ ಅಡಿಯಲ್ಲಿ ಭಿತ್ತಿ ಪತ್ರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಕುಮಾರಿ ಆಶಿತಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಕುಮಾರಿ ಅಪೇಕ್ಷ ಅತಿಥಿಗಳ ಕಿರು ಪರಿಚಯವನ್ನು ನೀಡಿ,ಕುಮಾರಿ ಅನಾಘ ವಂದಿಸಿದರು.ವಿದ್ಯಾರ್ಥಿಗಳು ಹಳದಿ ಹಾಗೂ ಕೆಂಪು ಬಣ್ಣದ ದಿರಿಸಿನಿಂದ ಕಂಗೊಳಿಸುತ್ತಿದ್ದರು.ಶಾಲಾ ಶಿಕ್ಷಕ ವೃಂದ ,ಶಿಕ್ಷಣ ಸ್ನಾತಕೋತ್ತರದ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya
error: Content is protected !!