July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕನ್ನಡದ ಹಿರಿಮೆ, ಭಾಷೆಯ ಅಗತ್ಯ, ಸಾಹಿತ್ಯ ಪ್ರೀತಿ, ಭಾಷೆಯ ಶುದ್ಧತೆ, ತಾಯ್ನಾಡಿನ ಗೌರವ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾಷೆಯ ಮಹತ್ವ,ಕನ್ನಡ ಹೃದಯದ ಭಾಷೆ,ಭಾವನೆಯನ್ನು ಸ್ಪಂದಿಸುವ ಭಾಷೆ ನಾವು ಆಂಗ್ಲ ಮಾಧ್ಯಮದವರು ಆದರೂ ಕನ್ನಡ ಹಾಗೂ ಕರ್ನಾಟಕದ ಸಂಸ್ಕೃತಿಯನ್ನು ಮರೆಯಲಾರೆವು ಎಂದು ನುಡಿದು ಎಲ್ಲರನ್ನೂ ಸ್ವಾಗತಿಸಿದರು. ರಾಜ್ಯೋತ್ಸವದ ಕುರಿತಾಗಿ ಇಣುಕು ನೋಟ ಪಂಪನಿಂದ ಆಧುನಿಕತೆಯವರೆಗೆ ಎಂಬ ಶೀರ್ಷಿಕೆ ಅಡಿಯಲ್ಲಿ ಭಿತ್ತಿ ಪತ್ರಿಕೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಅದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಕುಮಾರಿ ಆಶಿತಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಕುಮಾರಿ ಅಪೇಕ್ಷ ಅತಿಥಿಗಳ ಕಿರು ಪರಿಚಯವನ್ನು ನೀಡಿ,ಕುಮಾರಿ ಅನಾಘ ವಂದಿಸಿದರು.ವಿದ್ಯಾರ್ಥಿಗಳು ಹಳದಿ ಹಾಗೂ ಕೆಂಪು ಬಣ್ಣದ ದಿರಿಸಿನಿಂದ ಕಂಗೊಳಿಸುತ್ತಿದ್ದರು.ಶಾಲಾ ಶಿಕ್ಷಕ ವೃಂದ ,ಶಿಕ್ಷಣ ಸ್ನಾತಕೋತ್ತರದ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya
error: Content is protected !!