ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ: ಖ್ಯಾತ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಯಕ್ಷಗಾನದಲ್ಲಿ ಹಾಸ್ಯದ ಮೂಲಕ ಅವರು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ನಮ್ಮ ಧರ್ಮಸ್ಥಳ ಯಕ್ಷಗಾನ ಮಂಡಳಿಯಲ್ಲಿ ಕೂಡಾ ಅವರು ಕಲಾವಿದರಾಗಿ ಹಲವು ವರ್ಷಗಳ ಕಾಲ ಸೇವೆಸಲ್ಲಿಸಿರುತ್ತಾರೆ.

ಇದೇ ಜುಲೈಯಲ್ಲಿ ಅವರು ಧರ್ಮಸ್ಥಳದಲ್ಲಿ ವಾಚನ-ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಅವರ ನಿಧನದಿಂದ ಪ್ರತಿಭಾವಂತರ ಹಾಸ್ಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ  ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಕುಟುಂಬವರ್ಗದವರನ್ನು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Leave a Comment

error: Content is protected !!