July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಖ್ಯಾತ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಯಕ್ಷಗಾನದಲ್ಲಿ ಹಾಸ್ಯದ ಮೂಲಕ ಅವರು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ನಮ್ಮ ಧರ್ಮಸ್ಥಳ ಯಕ್ಷಗಾನ ಮಂಡಳಿಯಲ್ಲಿ ಕೂಡಾ ಅವರು ಕಲಾವಿದರಾಗಿ ಹಲವು ವರ್ಷಗಳ ಕಾಲ ಸೇವೆಸಲ್ಲಿಸಿರುತ್ತಾರೆ.

ಇದೇ ಜುಲೈಯಲ್ಲಿ ಅವರು ಧರ್ಮಸ್ಥಳದಲ್ಲಿ ವಾಚನ-ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಅವರ ನಿಧನದಿಂದ ಪ್ರತಿಭಾವಂತರ ಹಾಸ್ಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ  ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಕುಟುಂಬವರ್ಗದವರನ್ನು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya
error: Content is protected !!