September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!