July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya
error: Content is protected !!