23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

ಬೆಳ್ತಂಗಡಿ: ‘ ಉನ್ನತ ಶಿಕ್ಷಣ ಪಡೆದು, ಸಂಶೋಧನಾ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳಿವೆ. ಬಯೋ ಕೆಮಿಸ್ಟ್ರಿ ಅಧ್ಯಯನದಲ್ಲಿ ರಕ್ತದಲ್ಲಿರುವ ಸುಮಾರು ಎರಡು ಸಾವಿರ ಪ್ರೊಟೀನ್ ಗಳ ಗುಣಲಕ್ಷಣಗಳನ್ನು ಅರಿತು ದೇಹದ ಕಾಯಿಲೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಆವಿಷ್ಕಾರವಾಗಿದೆ. ಬಯೋಪ್ಸಿ ಮಾಡದೆ ದೇಹದೊಳಗಿನ ರೋಗ ಪತ್ತೆ ಮಾಡುವ ವಿಧಾನಕ್ಕೆ ಇದು ಪೂರಕವಾಗಿದೆ. ಜೀನ್ ಗಳ ರಚನೆ, ಪ್ರೊಟೀನ್ ಗಳ ರಚನೆ ಮೊದಲಾದ ಕ್ಷೇತ್ರಗಳಲ್ಲಿ ಇತ್ತೀಚಿನ ವೈದ್ಯಕೀಯ ಅಧ್ಯಯನ ಗಳು ಸೂಕ್ಷ್ಮಾತಿಸೂಕ್ಷ್ಮ ವಾಗಿ ಬೆಳೆಯುತ್ತಿವೆ ‘. ಎಂದು ಅಮೆರಿಕಾದ ಮೇರಿ ಲ್ಯಾಂಡ್ ನ ಪ್ರೋಟಿಯೋಮಿಕ್ಸ್ ಇಂಕಂಪ್ಲೀಟ್ ಒಮಿಕ್ಸ್ ಸಂಶೋಧನಾ ಕೇಂದ್ರದ ಉಪಾಧ್ಯಕ್ಷರಾದ ಡಾ. ರಘೋತ್ತಮ ಅವರು ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ನಡೆದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಮೆರಿಕಾದ ಡೆಲ್ವಾರೆ ಯೂನಿವರ್ಸಿಟಿ ಯ ನ್ಯೂರಾಲಜಿಕ್ ಫಿಸಿಕಲ್ ಥೆರಪಿ ವಿಭಾಗದ ನಿರ್ದೇಶಕರಾದ ಡಾ. ಸೌಮ್ಯ ಅವರು ಮಾತನಾಡಿ ‘ ಶಸ್ತ್ರ ಚಿಕಿತ್ಸೆಯ ನಂತರ ದೇಹವನ್ನು ಪುನಃ ಸಾಮಾನ್ಯ ಸ್ಥಿತಿಗೆ ತರುವಲ್ಲಿ ಫಿಸಿಯೋಥೆರಪಿ ಮಹತ್ತ್ವವನ್ನು ವಿವರಿಸಿದರು.

ಸಂವಾದದ ಬಳಿಕ ವಿಜ್ಞಾನಿಗಳನ್ನು ಗೌರವಿಸಲಾಯಿತು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ , ಆಡಳಿತಾಧಿಕಾರಿ ಪುರುಷೋತ್ತಮ್ , ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್ , ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡರು.

Related posts

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya
error: Content is protected !!