23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ಕನ್ನಡ ಭಾಷೆ, ಸಾಹಿತ್ಯದ ಅಭಿರುಚಿ ಹಾಗೂ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ, ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ, ವಾಣಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ, ವಾಣಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya
error: Content is protected !!