July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ನ.2 ರಂದು ನಡೆಯಿತು.

ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರು ಕೆ ವಸಂತ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಪ್ರಮುಖವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ತನ್ನ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ತತ್ವವನ್ನು ಮತ್ತು ಸೇವೆಯನ್ನು ಪಾಲಿಸಬೇಕು.

ಉದ್ಘಾಟಕರಾಗಿ ಸಂತೋಷ್ ಪ್ರಭು ಎಂ, ಸಹಾಯಕ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇವರು ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ ತಿಳಿಸಿದರು. ತನ್ನನ್ನು ತಾನು ರಾಷ್ಟ್ರೀಯ ಸೇವಾ ಯೋಜನೆಯ ಮುಖಾಂತರ ಹೇಗೆ ಜೀವನದಲ್ಲಿ ರೂಪಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಬಹಳ ಉತ್ತಮವಾಗಿ ಸ್ಪೂರ್ತಿಯನ್ನು ನೀಡಿದರು. ಪ್ರಾಂಶುಪಾಲೆ ಡಾ.ಸವಿತಾ ಪ್ರಾಸ್ತವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಯಾಗಿ ಸುಕೇಶ್ ಕುಮಾರ್, ಪ್ರಾಂಶುಪಾಲರು, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ, ಇವರು ಪ್ರತಿಜ್ಞಾವಿಧಿ ಭೋದಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕ, ನಾಯಕಿ ಹಾಗೂ ಸ್ವಯಂ ಸೇವಕರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕನಾದ ದುಂಡಿರಾಜ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕಿಯಾದ ಜ್ಯೋತಿ ಹಂಚಿಕೊಂಡರು. ಬಬಿತಾ ರೈ ಉದ್ಘಾಟಕರನ್ನು ಪರಿಚಯಿಸಿದರು, ಸತೀಶ್ ನಿರೂಪಿಸಿ, ಶಮೀಯುಲ್ಲಾ ಸ್ವಾಗತಿಸಿ, ಸೌಮ್ಯ ವಂದಿಸಿದರು.

Related posts

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya
error: Content is protected !!