25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಡ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಅಯೂಬ್ ಮಾತನಾಡಿ ಕನ್ನಡದ ಹಿರಿಮೆಯು ನಮ್ಮೆಲ್ಲರ ಹೆಮ್ಮೆ. ಕನ್ನಡ ನಾಡಿನಲ್ಲಿ ಹುಟ್ಟಿದ ನಾವೇ ಧನ್ಯರು ಎಂದು ಕನ್ನಡ ನಾಡನ್ನು ಕೊಂಡಾಡಿದರು. ಪ್ರಾಸ್ತವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಅವರು ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ತಿಳಿಸಿ ಯಾವುದೇ ಭಾಷೆಯಾಗಲಿ ನಾವು ಅದನ್ನು ಇಷ್ಟಪಟ್ಟು ಕಲಿತರೆ ಅದು ನಮಗೆ ಶುದ್ಧವಾಗಿ ಬರುವುದು ಹಾಗೂ ಕನ್ನಡ ನಾಡಿನ ಹಿರಿಮೆಯನ್ನು ಬೆಳೆಸುವ ಕನ್ನಡ ಪ್ರಜೆಗಳಾಗಿ ಬಾಳಬೇಕು ಎಂದರು.

ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕೋಶಾಧಿಕಾರಿಯಾದ ಸಯ್ಯದ್ ಇರ್ಫಾನ್ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಶಾಲಾ ಸಹಶಿಕ್ಷಕಿ ಶ್ರೀಮತಿ ಕ್ರಿಶಲಾ ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಕನ್ನಡ ವಿಷಯದ ಶಿಕ್ಷಕಿ ಶ್ರೀಮತಿ ಪ್ರಮೀಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಕುಮಾರಿ ನಸೀಮಬಾನು ಧನ್ಯವಾದವಿತ್ತರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!