23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ರವರು ಕರ್ನಾಟಕದ ಏಕೀಕರಣ ಚಳುವಳಿ, ಕರ್ನಾಟಕ ರಾಜ್ಯದ ಉದಯ ಹಾಗೂ ಕರ್ನಾಟಕ ರಾಜ್ಯೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಜಾಲಿ ಡಿ’ಸೋಜಾ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಕಛೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕನ್ನಡದ ಸೊಬಗನ್ನು ವರ್ಣಿಸುವ ಗೀತೆಗಳನ್ನು ಹಾಡಿದರು.


ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಶ್ರೀಮತಿ ವಸಂತಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ವಂದಿಸಿದರು.
ಕಾಲೇಜಿನ ಕನ್ನಡ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿತು.

Related posts

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!