23.3 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೋಟ್ಯಾಂತರ ರೂಪಾಯಿಯ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರ ಮತ್ತು ಕಚ್ಚಾಸಾಮಾಗ್ರಿ ನೀಡಿ, ಅದು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದಾಗ ಅದನ್ನು ಹಿಂದಕ್ಕೆ ಪಡೆದು, ಹಣ ಹಿಂದಿರುಗಿಸುವುದಾಗಿ ಹೇಳಿದ್ದು, ಈಗ ಹಣ ನೀಡದೆ ವಂಚಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆಯ ಮಾಲಕ ಬಳಂಜ ನಿವಾಸಿ ಅಶ್ವತ್ ಹೆಗ್ಡೆಯವರ ವಿರುದ್ಧ ಅ.12ರಂದು ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಂಗಳೂರಿನಲ್ಲಿ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆ ಸ್ಥಾಪಿಸಿದ್ದ ಬಳಂಜದ ಅಶ್ವತ್ ಹೆಗ್ಡೆಯವರು ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದು ತಾನು ತನ್ನ ಸಂಸ್ಥೆಯ ಮೂಲಕ ಆರ್ಗ್ಯಾನಿಕ್ ಬ್ಯಾಗ್ ಮಾಡಲು ಯಂತ್ರವನ್ನು ಮತ್ತು ಕಚ್ಚಾ ಸಾಮಾಗ್ರಿಯನ್ನು, ಕೆಲಸಕ್ಕೆ ಕಾರ್ಮಿಕರನ್ನು ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿ ನನ್ನಿಂದ ಕೋಟ್ಯಾಂತರ ರೂಪಾಯಿ ಪಡೆದು ಯಂತ್ರನೀಡಿದ್ದರು. ಇದು ಸಮರ್ಪಕ ಕಾರ್ಯನಿರ್ವಹಿಸದಿದ್ದಾಗ ಇದನ್ನು ಹಿಂದಕ್ಕೆ ಪಡೆದು ಹಣ ಮರಳಿಸುವುದಾಗಿ ಹೇಳಿದ್ದರೂ, ಇದುವರೆಗೂ ಹಣ ನೀಡಿಲ್ಲ ಎಂದು ಆರೋಪಿಸಿ, ಬೆಂಗಳೂರಿನ ನೀಲಿಮಾ ಎಂಬವರು ನೀಡಿದ ದೂರಿನಂತೆ ಅಶ್ವತ್ಥ ಹೆಗ್ಡೆ ವಿರುದ್ಧ ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಳ್ಳು ದೂರಿನ ಬಗ್ಗೆ ಮಾಹಿತಿ:
ಮಹಿಳೆ ನೀಲಿಮಾ ಮತ್ತು ಆಕೆಯ ಪತಿ ಕಳೆದು ಒಂದೂವರೆ ತಿಂಗಳಿಂದ ನಿರಂತರವಾಗಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆಯಿಟ್ಟು, ಬ್ಲಾಕ್‌ಮೇಲ್ ಮಾಡುತ್ತಿರುವ ಕಾರಣ ಅವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಹಣ ಮರುಪಾವತಿಯ ಬಗೆಗೆ ಸವಿವರವಾದ ಮಾಹಿತಿಯನ್ನು ಅ.5 ರಂದು ನೀಡಲಾಗಿದೆ. ನ್ಯಾಯಾಲಯದ ದಾವೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದು ಅಶ್ವಥ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!