May 20, 2025
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೋಟ್ಯಾಂತರ ರೂಪಾಯಿಯ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರ ಮತ್ತು ಕಚ್ಚಾಸಾಮಾಗ್ರಿ ನೀಡಿ, ಅದು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದಾಗ ಅದನ್ನು ಹಿಂದಕ್ಕೆ ಪಡೆದು, ಹಣ ಹಿಂದಿರುಗಿಸುವುದಾಗಿ ಹೇಳಿದ್ದು, ಈಗ ಹಣ ನೀಡದೆ ವಂಚಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆಯ ಮಾಲಕ ಬಳಂಜ ನಿವಾಸಿ ಅಶ್ವತ್ ಹೆಗ್ಡೆಯವರ ವಿರುದ್ಧ ಅ.12ರಂದು ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಂಗಳೂರಿನಲ್ಲಿ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆ ಸ್ಥಾಪಿಸಿದ್ದ ಬಳಂಜದ ಅಶ್ವತ್ ಹೆಗ್ಡೆಯವರು ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದು ತಾನು ತನ್ನ ಸಂಸ್ಥೆಯ ಮೂಲಕ ಆರ್ಗ್ಯಾನಿಕ್ ಬ್ಯಾಗ್ ಮಾಡಲು ಯಂತ್ರವನ್ನು ಮತ್ತು ಕಚ್ಚಾ ಸಾಮಾಗ್ರಿಯನ್ನು, ಕೆಲಸಕ್ಕೆ ಕಾರ್ಮಿಕರನ್ನು ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿ ನನ್ನಿಂದ ಕೋಟ್ಯಾಂತರ ರೂಪಾಯಿ ಪಡೆದು ಯಂತ್ರನೀಡಿದ್ದರು. ಇದು ಸಮರ್ಪಕ ಕಾರ್ಯನಿರ್ವಹಿಸದಿದ್ದಾಗ ಇದನ್ನು ಹಿಂದಕ್ಕೆ ಪಡೆದು ಹಣ ಮರಳಿಸುವುದಾಗಿ ಹೇಳಿದ್ದರೂ, ಇದುವರೆಗೂ ಹಣ ನೀಡಿಲ್ಲ ಎಂದು ಆರೋಪಿಸಿ, ಬೆಂಗಳೂರಿನ ನೀಲಿಮಾ ಎಂಬವರು ನೀಡಿದ ದೂರಿನಂತೆ ಅಶ್ವತ್ಥ ಹೆಗ್ಡೆ ವಿರುದ್ಧ ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಳ್ಳು ದೂರಿನ ಬಗ್ಗೆ ಮಾಹಿತಿ:
ಮಹಿಳೆ ನೀಲಿಮಾ ಮತ್ತು ಆಕೆಯ ಪತಿ ಕಳೆದು ಒಂದೂವರೆ ತಿಂಗಳಿಂದ ನಿರಂತರವಾಗಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆಯಿಟ್ಟು, ಬ್ಲಾಕ್‌ಮೇಲ್ ಮಾಡುತ್ತಿರುವ ಕಾರಣ ಅವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಹಣ ಮರುಪಾವತಿಯ ಬಗೆಗೆ ಸವಿವರವಾದ ಮಾಹಿತಿಯನ್ನು ಅ.5 ರಂದು ನೀಡಲಾಗಿದೆ. ನ್ಯಾಯಾಲಯದ ದಾವೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದು ಅಶ್ವಥ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya
error: Content is protected !!