23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೋಟ್ಯಾಂತರ ರೂಪಾಯಿಯ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರ ಮತ್ತು ಕಚ್ಚಾಸಾಮಾಗ್ರಿ ನೀಡಿ, ಅದು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದಾಗ ಅದನ್ನು ಹಿಂದಕ್ಕೆ ಪಡೆದು, ಹಣ ಹಿಂದಿರುಗಿಸುವುದಾಗಿ ಹೇಳಿದ್ದು, ಈಗ ಹಣ ನೀಡದೆ ವಂಚಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆಯ ಮಾಲಕ ಬಳಂಜ ನಿವಾಸಿ ಅಶ್ವತ್ ಹೆಗ್ಡೆಯವರ ವಿರುದ್ಧ ಅ.12ರಂದು ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಂಗಳೂರಿನಲ್ಲಿ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆ ಸ್ಥಾಪಿಸಿದ್ದ ಬಳಂಜದ ಅಶ್ವತ್ ಹೆಗ್ಡೆಯವರು ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದು ತಾನು ತನ್ನ ಸಂಸ್ಥೆಯ ಮೂಲಕ ಆರ್ಗ್ಯಾನಿಕ್ ಬ್ಯಾಗ್ ಮಾಡಲು ಯಂತ್ರವನ್ನು ಮತ್ತು ಕಚ್ಚಾ ಸಾಮಾಗ್ರಿಯನ್ನು, ಕೆಲಸಕ್ಕೆ ಕಾರ್ಮಿಕರನ್ನು ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿ ನನ್ನಿಂದ ಕೋಟ್ಯಾಂತರ ರೂಪಾಯಿ ಪಡೆದು ಯಂತ್ರನೀಡಿದ್ದರು. ಇದು ಸಮರ್ಪಕ ಕಾರ್ಯನಿರ್ವಹಿಸದಿದ್ದಾಗ ಇದನ್ನು ಹಿಂದಕ್ಕೆ ಪಡೆದು ಹಣ ಮರಳಿಸುವುದಾಗಿ ಹೇಳಿದ್ದರೂ, ಇದುವರೆಗೂ ಹಣ ನೀಡಿಲ್ಲ ಎಂದು ಆರೋಪಿಸಿ, ಬೆಂಗಳೂರಿನ ನೀಲಿಮಾ ಎಂಬವರು ನೀಡಿದ ದೂರಿನಂತೆ ಅಶ್ವತ್ಥ ಹೆಗ್ಡೆ ವಿರುದ್ಧ ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಳ್ಳು ದೂರಿನ ಬಗ್ಗೆ ಮಾಹಿತಿ:
ಮಹಿಳೆ ನೀಲಿಮಾ ಮತ್ತು ಆಕೆಯ ಪತಿ ಕಳೆದು ಒಂದೂವರೆ ತಿಂಗಳಿಂದ ನಿರಂತರವಾಗಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆಯಿಟ್ಟು, ಬ್ಲಾಕ್‌ಮೇಲ್ ಮಾಡುತ್ತಿರುವ ಕಾರಣ ಅವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಹಣ ಮರುಪಾವತಿಯ ಬಗೆಗೆ ಸವಿವರವಾದ ಮಾಹಿತಿಯನ್ನು ಅ.5 ರಂದು ನೀಡಲಾಗಿದೆ. ನ್ಯಾಯಾಲಯದ ದಾವೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದು ಅಶ್ವಥ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!