ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೋಟ್ಯಾಂತರ ರೂಪಾಯಿಯ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರ ಮತ್ತು ಕಚ್ಚಾಸಾಮಾಗ್ರಿ ನೀಡಿ, ಅದು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದಾಗ ಅದನ್ನು ಹಿಂದಕ್ಕೆ ಪಡೆದು, ಹಣ ಹಿಂದಿರುಗಿಸುವುದಾಗಿ ಹೇಳಿದ್ದು, ಈಗ ಹಣ ನೀಡದೆ ವಂಚಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆಯ ಮಾಲಕ ಬಳಂಜ ನಿವಾಸಿ ಅಶ್ವತ್ ಹೆಗ್ಡೆಯವರ ವಿರುದ್ಧ ಅ.12ರಂದು ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಂಗಳೂರಿನಲ್ಲಿ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆ ಸ್ಥಾಪಿಸಿದ್ದ ಬಳಂಜದ ಅಶ್ವತ್ ಹೆಗ್ಡೆಯವರು ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದು ತಾನು ತನ್ನ ಸಂಸ್ಥೆಯ ಮೂಲಕ ಆರ್ಗ್ಯಾನಿಕ್ ಬ್ಯಾಗ್ ಮಾಡಲು ಯಂತ್ರವನ್ನು ಮತ್ತು ಕಚ್ಚಾ ಸಾಮಾಗ್ರಿಯನ್ನು, ಕೆಲಸಕ್ಕೆ ಕಾರ್ಮಿಕರನ್ನು ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿ ನನ್ನಿಂದ ಕೋಟ್ಯಾಂತರ ರೂಪಾಯಿ ಪಡೆದು ಯಂತ್ರನೀಡಿದ್ದರು. ಇದು ಸಮರ್ಪಕ ಕಾರ್ಯನಿರ್ವಹಿಸದಿದ್ದಾಗ ಇದನ್ನು ಹಿಂದಕ್ಕೆ ಪಡೆದು ಹಣ ಮರಳಿಸುವುದಾಗಿ ಹೇಳಿದ್ದರೂ, ಇದುವರೆಗೂ ಹಣ ನೀಡಿಲ್ಲ ಎಂದು ಆರೋಪಿಸಿ, ಬೆಂಗಳೂರಿನ ನೀಲಿಮಾ ಎಂಬವರು ನೀಡಿದ ದೂರಿನಂತೆ ಅಶ್ವತ್ಥ ಹೆಗ್ಡೆ ವಿರುದ್ಧ ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಳ್ಳು ದೂರಿನ ಬಗ್ಗೆ ಮಾಹಿತಿ:
ಮಹಿಳೆ ನೀಲಿಮಾ ಮತ್ತು ಆಕೆಯ ಪತಿ ಕಳೆದು ಒಂದೂವರೆ ತಿಂಗಳಿಂದ ನಿರಂತರವಾಗಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆಯಿಟ್ಟು, ಬ್ಲಾಕ್‌ಮೇಲ್ ಮಾಡುತ್ತಿರುವ ಕಾರಣ ಅವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಹಣ ಮರುಪಾವತಿಯ ಬಗೆಗೆ ಸವಿವರವಾದ ಮಾಹಿತಿಯನ್ನು ಅ.5 ರಂದು ನೀಡಲಾಗಿದೆ. ನ್ಯಾಯಾಲಯದ ದಾವೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದು ಅಶ್ವಥ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಕಕ್ಕಿಂಜೆ ಯುವಕ ಆಲ್ವಿನ್ ಸಿ. ಜೆ ಗೆ ಅಂತರರಾಷ್ಟ್ರೀಯ ಮಟ್ಟದ “ಯುವ ವಿಜ್ಞಾನಿ ಪ್ರಶಸ್ತಿ” ಗೌರವ

Suddi Udaya
error: Content is protected !!