25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೋಟ್ಯಾಂತರ ರೂಪಾಯಿಯ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರ ಮತ್ತು ಕಚ್ಚಾಸಾಮಾಗ್ರಿ ನೀಡಿ, ಅದು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದಾಗ ಅದನ್ನು ಹಿಂದಕ್ಕೆ ಪಡೆದು, ಹಣ ಹಿಂದಿರುಗಿಸುವುದಾಗಿ ಹೇಳಿದ್ದು, ಈಗ ಹಣ ನೀಡದೆ ವಂಚಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆಯ ಮಾಲಕ ಬಳಂಜ ನಿವಾಸಿ ಅಶ್ವತ್ ಹೆಗ್ಡೆಯವರ ವಿರುದ್ಧ ಅ.12ರಂದು ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಂಗಳೂರಿನಲ್ಲಿ ಎನ್ವಿಗ್ರೀನ್ ಬಯೋಟೆಕ್ ಸಂಸ್ಥೆ ಸ್ಥಾಪಿಸಿದ್ದ ಬಳಂಜದ ಅಶ್ವತ್ ಹೆಗ್ಡೆಯವರು ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದು ತಾನು ತನ್ನ ಸಂಸ್ಥೆಯ ಮೂಲಕ ಆರ್ಗ್ಯಾನಿಕ್ ಬ್ಯಾಗ್ ಮಾಡಲು ಯಂತ್ರವನ್ನು ಮತ್ತು ಕಚ್ಚಾ ಸಾಮಾಗ್ರಿಯನ್ನು, ಕೆಲಸಕ್ಕೆ ಕಾರ್ಮಿಕರನ್ನು ಒದಗಿಸಿಕೊಡುತ್ತೇನೆ ಎಂದು ಭರವಸೆ ನೀಡಿ ನನ್ನಿಂದ ಕೋಟ್ಯಾಂತರ ರೂಪಾಯಿ ಪಡೆದು ಯಂತ್ರನೀಡಿದ್ದರು. ಇದು ಸಮರ್ಪಕ ಕಾರ್ಯನಿರ್ವಹಿಸದಿದ್ದಾಗ ಇದನ್ನು ಹಿಂದಕ್ಕೆ ಪಡೆದು ಹಣ ಮರಳಿಸುವುದಾಗಿ ಹೇಳಿದ್ದರೂ, ಇದುವರೆಗೂ ಹಣ ನೀಡಿಲ್ಲ ಎಂದು ಆರೋಪಿಸಿ, ಬೆಂಗಳೂರಿನ ನೀಲಿಮಾ ಎಂಬವರು ನೀಡಿದ ದೂರಿನಂತೆ ಅಶ್ವತ್ಥ ಹೆಗ್ಡೆ ವಿರುದ್ಧ ಬೆಂಗಳೂರಿನ ಅಶೋಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಳ್ಳು ದೂರಿನ ಬಗ್ಗೆ ಮಾಹಿತಿ:
ಮಹಿಳೆ ನೀಲಿಮಾ ಮತ್ತು ಆಕೆಯ ಪತಿ ಕಳೆದು ಒಂದೂವರೆ ತಿಂಗಳಿಂದ ನಿರಂತರವಾಗಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆಯಿಟ್ಟು, ಬ್ಲಾಕ್‌ಮೇಲ್ ಮಾಡುತ್ತಿರುವ ಕಾರಣ ಅವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಹಣ ಮರುಪಾವತಿಯ ಬಗೆಗೆ ಸವಿವರವಾದ ಮಾಹಿತಿಯನ್ನು ಅ.5 ರಂದು ನೀಡಲಾಗಿದೆ. ನ್ಯಾಯಾಲಯದ ದಾವೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ ಎಂದು ಅಶ್ವಥ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!