ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರು ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ದುರ್ಬಲ & ಅಸಾಯಕ ಸ್ಥಿತಿಯಲ್ಲಿರುವ ಸದಸ್ಯರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡುತ್ತಿದ್ದು ಮುಂಡ್ರುಪ್ಪಾಡಿಯ ವಸಂತಿ ಯಾನೆ ಅಕ್ಕಣಿ ಯವರಿಗೆ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ಮೂಲಕ ನ.2 ರಂದು ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಪ್ರಶಾಂತ್, ಜ್ಞಾನ ವಿಕಾಸ ಸಮನ್ವಯಧಿಕಾರಿಯವರಾದ ಮಧುರಾ ವಸಂತ್, ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಸುಜಾತ ,ಮೋಹಿನಿ ಬೇಕಲ್ ,ಸ್ನೇಕ್ ಪ್ರಕಾಶ್ , ನಳಿನ್ ಕುಮಾರ್ ಉಪಸ್ಥಿತರಿದ್ದರು.

Leave a Comment

error: Content is protected !!