23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಚಾರು ಕೆಂಪನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯೋವ೯ರ ಶವಶುಕ್ರವಾರ ಬೆಳಗ್ಗೆ ಬಾವಿಯಲ್ಲಿ ಪತ್ತೆಯಾಗಿದ್ದು, ಹಲವಾರು ಸಂಶಯಗಳಿಗೆ ಕಾರಣವಾಗಿದೆ. ‌ಬೆಳಾಲು ಗ್ರಾಮದ ಕೆಂಪನೊಟ್ಟು ಜ್ಯೋತಿನಗರದ ವಿವಾಹಿತ ಮಹಿಳೆ ಶಶಿಕಲಾ ನಾಯ್ಕ (25ವ) ಎಂಬವರು ಸಂಶಯಾಸ್ಪದವಾಗಿ ಸಾವನ್ನಪ್ಪಿದವರು. ಕೆಂಪನೊಟ್ಟು ಎಂಬಲ್ಲಿ ತೋಟವೊಂದರ ಮನೆಯಲ್ಲಿ ಪತಿ ಪತ್ನಿ ಏಕೈಕ ಮಗಳ ಜೊತೆಕೆಲಸ ಮಾಡಿಕೊಂಡಿದ್ದು ಅಲ್ಲೇ ವಾಸ್ತವ್ಯವಿದ್ದರು. ಗುರುವಾರ ರಾತ್ರಿ ದಂಪತಿ ಮಾತ್ರ ಮನೆಯಲ್ಲಿ ಇದ್ದರೆನ್ನಲಾಗಿದೆ.

ಬೆಳಗ್ಗೆ ಪತಿ ಸುಧಾಕರ ನಾಯ್ಕ ಅವರು ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದು ವಾಪಾಸು ಬಂದವರೇ ತನ್ನ ಪತ್ನಿಯ ಶವ ಬಾವಿಯಲ್ಲಿರುವುದಾಗಿ ಪೊಲೀಸರಿಗೆ ಮಾಹಿತಿ‌‌ ನೀಡಿದ್ದರು. ವಿಚಾರ ಹೊರಗೆ ಗೊತ್ತಾಗುತ್ತಿರುವಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನ‌ ಜಮಾಯಿಸಿದ್ದರು. ಆಕೆಯೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಅಥವಾ ಇನ್ನೇನಾದರೂ ನಡೆದಿದೆಯೇ ಎಂಬ ಬಗ್ಗೆ ಅನುಮಾನವೂ ವ್ಯಕ್ತವಾಗಿದೆ.

ಸ್ಥಳಕ್ಕೆ ಬಂಟ್ವಾಳ ಡಿವೈಎಸ್‌ಪಿ, ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕಾರ್ಯಕರ್ತರು ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಪೊಲೀಸರಿಗೆ ನೆರವಾದರು. ಸ್ಥಳಕ್ಕೆ ವಿಧಿ‌ವಿಜ್ಞಾನ ಪ್ರಯೋಗಾಲಯದ (ಎಫ್.ಎಸ್.ಎಲ್) ಅಧಿಕಾರಿಗಳು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya
error: Content is protected !!