22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

ಉಜಿರೆ: ಕಲಿಕೆ ಎಂಬುದು ನಿರಂತರವಾಗಿರಬೇಕು ಈ ನಿರಂತರ ಕಲಿಕೆ ನಿಮ್ಮ ಉದ್ಯಮದ ಏಳಿಗೆಗೆ ಸಹಕಾರಿಯಾಗುತ್ತದೆ. ಶೃದ್ಧೆ ಕೂಡ ಬಹಳ ಮುಖ್ಯ, ಶೃದ್ಧೆಯಿಂದ ಕಲಿತಾಗ ಎನನ್ನು ಬೇಕಾದರೂ ಸಾಧಿಸಬಹುದು, ಯುವಕರಾದ ನೀವುಗಳು ಜೀವನದಲ್ಲಿ ಒಂದು ದಾರಿಯನ್ನು ಹುಡುಕಲು ರುಡ್‌ಸೆಟ್ ಸಂಸ್ಥೆಗೆ ಬಂದಿರುತ್ತೀರಿ, ತರಬೇತಿಯನ್ನು ಪಡೆದ ನೀವುಗಳು ಸ್ವಂತ ಉದ್ಯಮಗಳನ್ನು ಸ್ಥಾಪಿಸಿ ಜೀವನದಲ್ಲಿ ಯಶಸ್ಸನ್ನುಗಳಿಸಿ, ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು, ಇತಿ ಮಿತಿಯೊಳಗೆ ಬದುಕಲು ಕಲಿಯಿರಿ, ದುರಬ್ಯಾಸಗಳಿಂದ ದೂರ ಇರಬೇಕು ಎಂದು ಎಸ್‌ಡಿಎಮ್ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್‌ರವರು ಅಭಿಪ್ರಾಯ ಪಟ್ಟರು.

ಅವರು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್‌ರವರು ಅಧ್ಯಕ್ಷ ಸ್ಥಾನ ವಹಿಸಿದ್ದರು, ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿ ಕಾರ್ಯಕ್ರಮ ನಿರ್ವಹಿಸಿದರೆ, ಕಛೇರಿ ಸಹಾಯಕರಾದ ಪ್ರವೀಣ್‌ರವರು ಧನ್ಯವಾದವಿತ್ತರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರಾದ ಅನಂತರಾಮ್ ಇವರು ಉಪಸ್ಥಿತರಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!