23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

ಉಜಿರೆ: ಕಲಿಕೆ ಎಂಬುದು ನಿರಂತರವಾಗಿರಬೇಕು ಈ ನಿರಂತರ ಕಲಿಕೆ ನಿಮ್ಮ ಉದ್ಯಮದ ಏಳಿಗೆಗೆ ಸಹಕಾರಿಯಾಗುತ್ತದೆ. ಶೃದ್ಧೆ ಕೂಡ ಬಹಳ ಮುಖ್ಯ, ಶೃದ್ಧೆಯಿಂದ ಕಲಿತಾಗ ಎನನ್ನು ಬೇಕಾದರೂ ಸಾಧಿಸಬಹುದು, ಯುವಕರಾದ ನೀವುಗಳು ಜೀವನದಲ್ಲಿ ಒಂದು ದಾರಿಯನ್ನು ಹುಡುಕಲು ರುಡ್‌ಸೆಟ್ ಸಂಸ್ಥೆಗೆ ಬಂದಿರುತ್ತೀರಿ, ತರಬೇತಿಯನ್ನು ಪಡೆದ ನೀವುಗಳು ಸ್ವಂತ ಉದ್ಯಮಗಳನ್ನು ಸ್ಥಾಪಿಸಿ ಜೀವನದಲ್ಲಿ ಯಶಸ್ಸನ್ನುಗಳಿಸಿ, ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು, ಇತಿ ಮಿತಿಯೊಳಗೆ ಬದುಕಲು ಕಲಿಯಿರಿ, ದುರಬ್ಯಾಸಗಳಿಂದ ದೂರ ಇರಬೇಕು ಎಂದು ಎಸ್‌ಡಿಎಮ್ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್‌ರವರು ಅಭಿಪ್ರಾಯ ಪಟ್ಟರು.

ಅವರು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್‌ರವರು ಅಧ್ಯಕ್ಷ ಸ್ಥಾನ ವಹಿಸಿದ್ದರು, ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಅತಿಥಿಗಳನ್ನು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿ ಕಾರ್ಯಕ್ರಮ ನಿರ್ವಹಿಸಿದರೆ, ಕಛೇರಿ ಸಹಾಯಕರಾದ ಪ್ರವೀಣ್‌ರವರು ಧನ್ಯವಾದವಿತ್ತರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರಾದ ಅನಂತರಾಮ್ ಇವರು ಉಪಸ್ಥಿತರಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!