25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya
error: Content is protected !!