ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರವಣ್ ಶೆಟ್ಟಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅ .27 ರಂದು SDM ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹೈ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅ .30ರಂದು ಮೂಡಬಿದ್ರೆ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಹೈಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.

ನ.3 ರಂದು ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಹೈಜಂಪ್ ಸ್ಪರ್ಧೆಯಲ್ಲಿ ಒಟ್ಟು 90 ವಿದ್ಯಾರ್ಥಿಗಳು ಭಾಗವಹಿಸಿದ್ದು . 21 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ಅದರಲ್ಲಿ ಉಜಿರೆ ಗ್ರಾಮದ ಶ್ರವಣ್ ಶೆಟ್ಟಿ ಕಾಶಿಬೆಟ್ಟು ಇವರು ಆಯ್ಕೆಯಾಗಿ ನಾಲ್ಕನೇ ಸ್ಥಾನವನ್ನು ಪಡೆದು ಪ್ರೇಕ್ಷಕರ ಮೆಚ್ಚುಗೆಯನ್ನು ಗಳಿಸಿದ್ದಾರೆ.

Leave a Comment

error: Content is protected !!