30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ 2025 ಜನವರಿಯಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾಕಲಶ ಹಾಗೂ ಜೀರ್ಣೋದ್ಧಾರದ ಕಾರ್ಯಾರಂಭದ ಉದ್ಘಾಟನಾ ಕಾರ್ಯಕ್ರಮವು ನ.3 ರಂದು ನಡೆಯಿತು.

ಉದ್ಘಾಟನೆಯನ್ನು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ ತಂತ್ರಿಗಳು ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸದಾನಂದ ಮೇಲಾಂಟ ವಹಿಸಿದರು.

ಕೆಮ್ಮಿಂಜೆ ವೇದಮೂರ್ತಿ ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಪ್ರವಚನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಸಿದ್ದಕಟ್ಟೆ ಉದ್ಯಮಿ ದುರ್ಗಾದಾಸ್ ಶೆಟ್ಟಿ , ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಮಹಾಬಲ ಕುಲಾಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಸೇವಾ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಹಾಗೂ ಸದಸ್ಯರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ರೈತಬಂಧು ಆಹಾರೋದ್ಯಮ ಮಾರುತಿಪುರ ಅಧ್ಯಕ್ಷ ಶಿವಶಂಕರ ಸ್ವಾಗತಿಸಿ, ನವೀನ್ ಕುಮಾರ್ ನಿರೂಪಿಸಿದರು. ನಾರಾಯಣ ಧನ್ಯವಾದವಿತ್ತರು.

Related posts

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya
error: Content is protected !!