22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ 2025 ಜನವರಿಯಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾಕಲಶ ಹಾಗೂ ಜೀರ್ಣೋದ್ಧಾರದ ಕಾರ್ಯಾರಂಭದ ಉದ್ಘಾಟನಾ ಕಾರ್ಯಕ್ರಮವು ನ.3 ರಂದು ನಡೆಯಿತು.

ಉದ್ಘಾಟನೆಯನ್ನು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ ತಂತ್ರಿಗಳು ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸದಾನಂದ ಮೇಲಾಂಟ ವಹಿಸಿದರು.

ಕೆಮ್ಮಿಂಜೆ ವೇದಮೂರ್ತಿ ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಪ್ರವಚನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಸಿದ್ದಕಟ್ಟೆ ಉದ್ಯಮಿ ದುರ್ಗಾದಾಸ್ ಶೆಟ್ಟಿ , ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಮಹಾಬಲ ಕುಲಾಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಸೇವಾ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಹಾಗೂ ಸದಸ್ಯರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ರೈತಬಂಧು ಆಹಾರೋದ್ಯಮ ಮಾರುತಿಪುರ ಅಧ್ಯಕ್ಷ ಶಿವಶಂಕರ ಸ್ವಾಗತಿಸಿ, ನವೀನ್ ಕುಮಾರ್ ನಿರೂಪಿಸಿದರು. ನಾರಾಯಣ ಧನ್ಯವಾದವಿತ್ತರು.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!