22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

ಬೆಳ್ತಂಗಡಿ: ಕೆ.ಎನ್. ಭಟ್ ಶಿರಾಡಿಪಾಲ್ ಅವರ ಕನ್ಮ ಶತಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮದ 46ನೇ ಸನ್ಮಾನವನ್ನು ವಿಶ್ರಾಂತ ದ್ವಿಭಾಷಾ ಶಿಕ್ಷಕ, ಮುಂಡಾಜೆ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ವೀರೇಶ್ವರ ವಿ. ಫಡ್ಕೆ ಹಾಗೂ 47ನೇ ಸನ್ಮಾನವನ್ನು ಬೆಳ್ತಂಗಡಿ ಮಹಿಳಾ ವೃಂದದ ಸಕ್ರಿಯ ಕಾರ್ಯಕರ್ತೆ ಬಹುರೂಪಿ ಪ್ರತಿಭೆ ಸಂಧ್ಯಾ ಎಸ್. ಪಾಳಂದೆ ಅವರಿಗೆ ಶಿರಾಡಿಪಾಲರ ಹುಟ್ಟೂರು ಮುಂಡಾಜೆಯಲ್ಲಿ ನೀಡಿ ಗೌರವಿಸಲಾಯಿತು.

ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವಿನಯಚಂದ್ರ, ಶತನಮನ ಶತಸನ್ಮಾನ ಕಾರ್ಯಕ್ರಮದ ಗೌರವ ಸಲಹೆಗಾರ ಕೆ. ಶ್ರೀಪತಿ ಭಟ್, ಶಿರಾಡಿಪಾಲರ ಮಕ್ಕಳಾದ ಅನುಪಮಾ ಚಿಪ್ಳೂಣಕರ್, ಶಶಿಧರ ಪರಾಂಜಪೆ, ವಿದ್ಯಾ ಡೋಂಗ್ರೆ, ಶಾಲಾ ಮುಖ್ಯೋಪಾಧ್ಯಾಯಿನಿ ಜಯಂತಿ ಟಿ. ಸನ್ಮಾನಿತರನ್ನು ಗೌರವಿಸಿದರು.

ಕಾರ್ಯಕ್ರಮದ ಸಂಘಟಕ ಕೃಷ್ಣಕುಮಾರ್ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

Related posts

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!