September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ನ.3 ರಂದು ಸೌತಡ್ಕ ದೇವಸ್ಥಾನದಲ್ಲಿ ನಡೆಯಿತು.

ರೂ. 9.98 ಲಕ್ಷ ವೆಚ್ಚದಲ್ಲಿ ಕೆನರಾ ಬ್ಯಾಂಕ್ ನ ಅನುದಾನದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಸೇವಾ ಕೌಂಟರ್ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ಹಾಗೂ ದೇವಳದ ಭಕ್ತರಾದ ಉದಯರಾಜ್ ಪೆರ್ಮುದೆ ಇವರ ಸೇವಾರ್ಥ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನವಾದ ಶಿಲಾಮಯ ಅಶ್ವತ್ಥ ಕಟ್ಟೆ ಕಾಮಗಾರಿಯ ಶಿಲಾನ್ಯಾಸವನ್ನು ದೇವಸ್ಥಾನದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಹಾಗೂ ಸುಬ್ರಹ್ಮಣ್ಯ ತೋಡ್ತಿಲ್ಲಾಯ ನೇತೃತ್ವದಲ್ಲಿ ನೆರವೇರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ರೂ. 25,000/- ಕೊಕ್ಕಡ ಕೆನರಾ ಬ್ಯಾಂಕ್‌ನ (CSR FUND) ಅನುದಾನದಿಂದ ಸೌತಡ್ಕ “ಶಿಶು ಮಂದಿರದ ಮಕ್ಕಳಿಗೆ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಕೆನರಾ ಬ್ಯಾಂಕಿನ ನಿವೃತ್ತ ಡಿಜಿಎಮ್ ಉದಯ ಭಟ್, ಕೊಕ್ಕಡ ಬ್ಯಾಂಕಿನ ಮಾನೇಜರ್ ಅಂಕಿತ್, ಎಜಿಎಮ್ ನರೇಂದ್ರ ರೆಡ್ಡಿ, ನೆಲ್ಯಾಡಿ ಕೆನರಾ ಬ್ಯಾಂಕಿನ ಮಾನೇಜರ್ ವಿಪಿನ್, ಉದಯ್ ರಾಜ್ ಪೆರ್ಮುದೆ , ಆರ್.ಎಸ್ ಎಸ್ ಮುಖಂಡ ಕೃಷ್ಣ ಭಟ್ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಬ್ಯಾಂಕಿನ ಕುಶಾಲಪ್ಪ ಗೌಡ, ಕೊಕ್ಕಡ ಗ್ರಾ,ಪಂ. ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ, ಸದಸ್ಯರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಸ್ವಾಗತಿಸಿದರು. ಪುರಂದರ ಕೆ ಕಡಿರ ಧನ್ಯವಾದವಿತ್ತರು.

Related posts

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!