September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಜೇನು ಕುರುಬ, ಬೆಟ್ಟ ಕುರುಬ, ಯರವ, ಸೋಲಿಗ, ಕೊರಗ, ಹಸಲರು, ಗೊಂಡ, ಮಲೆಕುಡಿಯ, ಗೌಡ್ಲು, ಸಿದ್ದಿ, ಹಕ್ಕಿಪಿಕ್ಕಿ ಡೋಂಗ್ರೀ-ಗರಾಸಿಯಾ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ ನ 4 ಮತ್ತು5 ರಂದು ಬೆಳ್ತಂಗಡಿ ಕೊಯ್ಯೂರು ಗ್ರಾಮದ ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ.


ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ. ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ, ಶಿವಕುಮಾರ್‌ರವರು ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಅಧ್ಯಕ್ಷರು ಪುಟ್ಟ ಬಸವಯ್ಯ, ಎಚ್.ಡಿ. ಕೋಟೆ ಮೈಸೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಸೋಲಿಗ ಅಭಿವೃದ್ಧಿ ಸಂಘಟನೆಯ ಡಾ. ಸಿ. ಮಾದೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya
error: Content is protected !!